ಶಿವಮೊಗ್ಗ,.14: ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಜನರ(ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ) ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಂಡಿದ್ದು, ವಿವಿಧ ಕಾರಣಗಳಿಂದಾಗಿ ಸಮೀಕ್ಷೆಯಲ್ಲಿಭಾಗವಹಿಸಲು ಸಾಧ್ಯವಾಗದೇ ಇರುವವರಿಗಾಗಿ ಅವಕಾಶ ನೀಡುವ ಹಿನ್ನಲೆಯಲ್ಲಿ ಆನ್ಲೈನ್ ಮೂಲಕಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ನ. 30ರವರೆಗೆ ವಿಸ್ತರಿಸಲಾಗಿದೆ.
https:/kscbcselfdeclaration.karnataka.gov.in ಮೂಲಕ ಆನ್ಲೈನ್ ಸಮೀಕ್ಷೆಯಲ್ಲಿ ಸ್ವಯಂಪಾಲ್ಗೊಳ್ಳುವಂತೆ ಹಿಂದುವಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿತಿಳಿಸಿರುತ್ತಾರೆ.
