ವಿದ್ಯಾರ್ಥಿನಿಗೆ ದೋಖಾ!
ಬೆತ್ತಲೆ ಪೋಟೋ ಬ್ಲಾಕ್ ಮೇಲ್
ಬಂಜಾರ ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಜೈಲುಪಾಲು!
ಬಂಜಾರ ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಡಿ.ಆರ್ ಗಿರೀಶ್ ವಿರುದ್ದ ಬೆಂಗಳೂರು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ತನ್ನದೆ ಸಮುದಾಯದ ವಿದ್ಯಾರ್ಥಿನಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ , ವಂಚನೆ ನಡೆಸಿದ ಪ್ರಕರಣ ದಾಖಲಾಗಿ. ಜೈಲು ಸೇರಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಬೆಂಗಳೂರಿನ ಕಾಲೇಜುವೊಂದರಲ್ಲಿ ಬಿ.ಇ ವಿದ್ಯಾಭ್ಯಾಸ ಮಾಡುತ್ತಿರುವ ೧೯ ವರ್ಷದ ವಿದ್ಯಾರ್ಥಿನಿಯೊಬ್ಬಳು ದಿನಾಂಕ 23/1/2025 ರಂದು ಜ್ಞಾನಭಾರತಿ ಪೊಲೀಸ್ ಠಾಣೆ ಹಾಜರಾಗಿ ಗಿರೀಶ್ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ 25/1/2025 ರಿಂದ ಜುಲೈ 2025 ರ ವರೆಗೂ ನನ್ನನ್ನು ದೈಹಿಕವಾಗಿ ಬಳಸಿಕೊಂಡಿದ್ದು, ಇದೀಗ ಮದುವೆಯಾಗದೆ, ನನ್ನ ಖಾಸಗಿ ಪೋಟೊಗಳನ್ನು ಇಟ್ಟುಕೊಂಡು ಬೆದರಿಕೆ ಹಾಕುತ್ತಿದ್ದಾನೆ ಎಂದು ದೂರು ನೀಡಿದ್ದಾರೆ.
ಅದರಂತೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆ ಯಡಿ ಲೈಂಗಿಕವಾಗಿ ದುರ್ಬಳಕೆ, ಆಮಿಷ, ವಂಚನೆ ಪ್ರಕರಣವನ್ನು ದಾಖಲಿಸಿ ಗಿರೀಶ್ ನನ್ನು ಬಂಧಿಸಿ ಪರಪ್ಪನ ಅಗ್ರಹಾರಕ್ಕೆ ಕಳುಹಿಸಿದ್ದಾರೆ.
ಏನಿದು ಪ್ರಕರಣ?

