ಶಿವಮೊಗ್ಗ,ಏ.02: ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025 ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಅತ್ಯುತ್ತಮ ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಿದೆ.
ಲೇಖಕರು/ಪ್ರಕಾಶಕರು/ಸಾಹಿತ್ಯಾಸಕ್ತ ಸಾರ್ವಜನಿಕರು ನಾಲ್ಕು ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಈ ವಿಳಾಸಕ್ಕೆ ರಿಜಿಸ್ಟರ್ ಅಂಚೆ/ಕೊರಿಯರ್ ಮೂಲಕ ಅಥವಾ ಖುದ್ದಾಗಿ ದಿ:30/06/2026 ರೊಳಗೆ ತಲುಪುವಂತೆ ಕಳುಹಿಸಬೇಕು.
2025ನೇಯ ವರ್ಷದ ಅತ್ಯುತ್ತಮ ಕೃತಿಗಳಿಗೆ ಬಹುಮಾನ :-
ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪ್ರತಿ ವರ್ಷದಂತೆ 2025ನೆಯ ವರ್ಷದ ಪುಸ್ತಕ ಬಹುಮಾನಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2025ರ ಜನವರಿ 01 ರಿಂದ 2025ರ ಡಿಸೆಂಬರ್ 31 ರೊಳಗೆ ಪ್ರಥಮಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿರಬೇಕು. ಕೃತಿಯಲ್ಲಿ ಪ್ರಥಮ ಮುದ್ರಣ 2025 ಎಂದು ಮುದ್ರಿತವಾಗಿರಬೇಕು.
ಕಾವ್ಯ, ನವಕವಿಗಳ ಪ್ರಥಮ ಕವನ ಸಂಕಲನ (ದೃಢೀಕರಣ ಪತ್ರದೊಂದಿಗೆ), ಕಾವ್ಯ ಹಸ್ತಪ್ರತಿ (30 ವರ್ಷ ಒಳಗಿನ ಯುವಕವಿಗಳ ಅಪ್ರಕಟಿತ ಕವನ ಸಂಕಲನದ ಹಸ್ತಪ್ರತಿಯನ್ನು ಕಳಿಸಿಕೊಡಬೇಕು. (ಚಿ.ಶ್ರೀನಿವಾಸರಾಜು ದತ್ತಿನಿಧಿ ಬಹುಮಾನಕ್ಕಾಗಿ), ಕಾದಂಬರಿ (ಅಕಾಡೆಮಿ ಪುಸ್ತಕ ಬಹುಮಾನ ಹಾಗೂ ಚದುರಂಗ ದತ್ತಿನಿಧಿ ಬಹುಮಾನಗಳಿಗಾಗಿ), ಸಣ್ಣಕತೆ, ನಾಟಕ, ಲಲಿತ ಪ್ರಬಂಧ (ಹರಟೆ ಮತ್ತು ವಿನೋದ ಸಾಹಿತ್ಯ ಸೇರಿ)(ಅಕಾಡೆಮಿ ಮಸ್ತಕ ಬಹುಮಾನ ಹಾಗೂ ವಿ.ಸೀತಾರಾಮಯ್ಯ ಸೋದರಿ ಇಂದಿರಾ ದತ್ತಿನಿಧಿ ಬಹುಮಾನಗಳಿಗಾಗಿ), ಪ್ರವಾಸ ಸಾಹಿತ್ಯ, ಜೀವನಚರಿತ್ರೆ / ಆತ್ಮಕಥೆ (ಅಕಾಡೆಮಿ ಪುಸ್ತಕ ಬಹುಮಾನಹಾಗೂ ಸಿಂಪಿ ಲಿಂಗಣ್ಣ ದತ್ತಿನಿಧಿ ಬಹುಮಾನಗಳಿಗಾಗಿ), ಸಾಹಿತ್ಯ ವಿಮರ್ಶೆ (ಸಾಹಿತ್ಯಚರಿತ್ರೆ, ಸಾಹಿತ್ಯತತ್ವ ಮತ್ತು ಸೌಂದರ್ಯ ಮೀಮಾಂಸೆ ಸೇರಿ) (ಅಕಾಡೆಮಿ ಮಸ್ತಕ ಬಹುಮಾನ ಹಾಗೂ ಪಿ. ಶ್ರೀನಿವಾಸರಾವ್ ದತ್ತಿನಿಧಿ ಬಹುಮಾನಗಳಿಗಾಗಿ), ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ (ಭೌತ, ರಸಾಯನ, ಗಣಿತ, ಪ್ರಾಣಿ, ಸಸ್ಯ, ಇಂಜಿನಿಯರಿಂಗ್, ವೈದ್ಯ, ಭೂ, ಖಗೋಳ, ಗೃಹ ವಿಜ್ಞಾನ, ಪರಿಸರ), ಮಾನವಿಕ (ಜಾನಪದ, ಇತಿಹಾಸ, ರಾಜ್ಯ ಶಾಸ್ತ್ರ, ಸಮಾಜಶಾಸ್ತ್ರ, ಮಾನವಶಾಸ್ತ್ರ, ಮನಃಶಾಸ್ತ್ರ, ಭಾಷಾಶಾಸ್ತ್ರ, ಶಿಕ್ಷಣ, ವಾಣಿಜ್ಯ, ಕಾನೂನು, ಗ್ರಂಥಭಂಡಾರ ವಿಜ್ಞಾನ, ಸಮೂಹ ಸಂವಹನ, ಧಾರ್ಮಿಕ, ದಾರ್ಶನಿಕ), ಗ್ರಂಥ ಸಂಪಾದನೆ(ಪ್ರಾಚೀನ ಕೃತಿಗಳ ಸಂಪಾದನೆ) / ಸಂಶೋಧನೆ (ಕನ್ನಡ ಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಗಳಿಗೆಸಂಬಂಧಿಸಿದ ಸಂಶೋಧನೆ), ವೈಚಾರಿಕ / ಅಂಕಣ ಬರಹ (ಅಕಾಡೆಮಿ ಪುಸ್ತಕ ಬಹುಮಾನ ಹಾಗೂಬಿ.ವಿ. ವೀರಭದ್ರಪ್ಪ ದತ್ತಿನಿಧಿ ಬಹುಮಾನಗಳಿಗಾಗಿ), ಅನುವಾದ-1 (ಇಂಗ್ಲಿಷ್ ಸೇರಿದಂತೆ ಭಾರತೀಯ ಭಾಷೆಯಿಂದ ಕನ್ನಡಕ್ಕೆ ಅನುವಾದಗೊಂಡ ಸೃಜನ/ಸೃಜನೇತರ ಕೃತಿಗಳು (ಎಲ್ ಗುಂಡಪ್ಪ ಮತ್ತು ಶಾರದಮ್ಮ ದತ್ತಿನಿಧಿ ಬಹುಮಾನಗಳಿಗಾಗಿ), ಅನುವಾದ-2 (ಕನ್ನಡದಿಂದ ಭಾರತೀಯ ಭಾಷೆಗಳಿಗೆಅನುವಾದಗೊಂಡ ಸೃಜನ/ಸೃಜನೇತರ ಕೃತಿಗಳು), ಲೇಖಕರ ಮೊದಲ ಸ್ವತಂತ್ರ ಕೃತಿ (2025ರಲ್ಲಿ ಮುದ್ರಣಗೊಂಡ ಮೊದಲ ಸ್ವತಂತ್ರಕೃತಿ. ಖಾತರಿಪಡಿಸಲು ದೃಢೀಕರಣ ಪತ್ರ ಲಗತ್ತಿಸಬೇಕು.) (ಅಕಾಡೆಮಿ ಮಸ್ತಕ ಬಹುಮಾನ ಹಾಗೂ ಮಧುರಚೆನ್ನ ದತ್ತಿನಿಧಿ ಬಹುಮಾನಗಳಿಗಾಗಿ) (ಕಾವ್ಯ ಪ್ರಕಾರವನ್ನುಹೊರತುಪಡಿಸಿ), ಕನ್ನಡದಿಂದ ಇಂಗ್ಲೀಷಿಗೆ ಅನುವಾದ (ಅಮೆರಿಕನ್ನಡ ದತ್ತಿನಿಧಿ ಬಹುಮಾನಕ್ಕಾಗಿ), ದಾನಸಾಹಿತ್ಯ (ದಾಸ ಸಾಹಿತ್ಯಕುರಿತ ಸೃಜನ/ ಸೃಜನೇತರ ಕೃತಿಗಳು) (ಶ್ರೀಮತಿ ಜಲಜಾ ಶ್ರೀಪತಿ ಆಚಾರ್ಯಗಂಗೂರ್ ದತ್ತಿನಿಧಿ ಬಹುಮಾನಕ್ಕಾಗಿ), ಸಂಕೀರ್ಣ (ಮೇಲಿನ ಯಾವುದೇ ಪ್ರಕಾರಕ್ಕೆ ಹೊಂದಿಕೊಳ್ಳದ ವಿಶಿಷ್ಟ ಕೃತಿಗಳು), ಗಜಲ್ ಕಾವ್ಯ (ನಾಡೋಜ ಡಾ. ಶಾಂತರಸ ಗಜಲ್ ಕಾವ್ಯ ದತ್ತಿಬಹುಮಾನಕ್ಕಾಗಿ). ಕುವೆಂಪು ಅವರ ಕೃತಿಗಳು ಮತ್ತು ಆಶಯಗಳ ಹಿನ್ನೆಲೆಯಲ್ಲಿ ರಚನೆಗೊಂಡ ಕನ್ನಡಸಾಹಿತ್ಯದ ಯಾವುದೇ ಪ್ರಕಾರದ ಪುಸ್ತಕ (ಬಾ ಇಲ್ಲಿ ಸಂಭವಿಸು–ಶ್ರೀಮತಿ ಕೆ.ಎಲ್. ಲಕ್ಷ್ಮಮ್ಮ ಮತ್ತು ಪ್ರೊ. ಶಿವರಾಮಯ್ಯ ದತ್ತಿನಿಧಿ ಬಹುಮಾನಕ್ಕಾಗಿ).
ಬಹುಮಾನಕ್ಕಾಗಿ ಪರಿಗಣಿಸಲ್ಪಡದ ಕೃತಿಗಳು:
ಮರುಮುದ್ರಣವಾದ ಪುಸ್ತಕಗಳು. ಪಿಎಚ್.ಡಿ. ಪದವಿಗಾಗಿ ಸಿದ್ಧಪಡಿಸಿದ ಸಂಶೋಧನಾ ಗ್ರಂಥಗಳು. ಪಠ್ಯಪುಸ್ತಕಗಳು. ಅಕಾಡೆಮಿಯ ಗೌರವ ಪ್ರಶಸ್ತಿ ಪುರಸ್ಕೃತ ಸಾಹಿತಿಗಳ ಕೃತಿಗಳು. ಈಗಾಗಲೇ ಕರ್ನಾಟಕಸಾಹಿತ್ಯ ಅಕಾಡೆಮಿಯಿಂದ ಒಟ್ಟಾರೆ ಮೂರು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳು. ಒಂದುಪ್ರಕಾರದಲ್ಲಿ ಒಂದು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳು.
ಒಬ್ಬ ಲೇಖಕರಿಗೆ ಮೂರು ಬಾರಿ ಬೇರೆ ಬೇರೆ ಪ್ರಕಾರಗಳಲ್ಲಿ ಬಹುಮಾನ ಪಡೆಯುವ ಅವಕಾಶವಿದೆ. ಬಹುಮಾನಕ್ಕಾಗಿ ಕಳುಹಿಸುವ ಕೃತಿಯ ಮೇಲೆ ತಿಳಿಸಿದ ಪ್ರಕಾರಗಳಲ್ಲಿ ಯಾವ ಸಾಹಿತ್ಯ ಪ್ರಕಾರಕ್ಕೆಸೇರುತ್ತದೆ ಎನ್ನುವುದನ್ನು ಸ್ಪಷ್ಟವಾಗಿ ಪುಸ್ತಕದ ಶೀರ್ಷಿಕೆ ಪುಟದಲ್ಲಿ ಬರೆದಿರಬೇಕು.
ಹೆಚ್ಚಿನ ವಿವರಗಳಿಗೆ ಅಕಾಡೆಮಿಯ ವೆಬ್ಸೈಟ್ www.sahithyaacademy.karnataka.gov.in ಅನ್ನು ಸಂಪರ್ಕಿಸಬಹುದೆಂದು ಕನ್ನಡ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ ಎನ್. ತಿಳಿಸಿದ್ದಾರೆ.
