Homeಜಿಲ್ಲೆಜಿಲ್ಲಾಧಿಕಾರಿಗಳಿಂದ ವಿದ್ಯಾರ್ಥಿ ನಿಲಯಕ್ಕೆ ದಿಢೀರ್ ಭೇಟಿ. ಎಲ್ಲಿ? ಏನೇಲ್ಲಾ ಪರಿಶೀಲನೆ?

ಜಿಲ್ಲಾಧಿಕಾರಿಗಳಿಂದ ವಿದ್ಯಾರ್ಥಿ ನಿಲಯಕ್ಕೆ ದಿಢೀರ್ ಭೇಟಿ. ಎಲ್ಲಿ? ಏನೇಲ್ಲಾ ಪರಿಶೀಲನೆ?

Spread the love

ಶಿವಮೊಗ್ಗ .7: ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಸೋಮವಾರ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ಸೌಲಭ್ಯಗಳನ್ನು ಪರಿಶೀಲಿಸಿದರು.

ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಸಾರ್ವಜನಿಕರಿಗೆ ಸಿಗುತ್ತಿರುವ ವೈದ್ಯಕೀಯ ಸೇವೆಗಳ ಬಗ್ಗೆ ಮಾಹಿತಿ ಪಡೆದರು. ಕೇಂದ್ರದ ಕಾರ್ಯನಿರ್ವಹಣೆ, ಅಗತ್ಯ ಔಷಧಿಗಳ ದಾಸ್ತಾನು ಇದೆಯೇ ಎಂಬುದನ್ನು ಪರಿಶೀಲಿಸಿದ ಅವರು ರೋಗಿಗಳೊಂದಿಗೆ ಕೇಂದ್ರದಿಂದ ದೊರಕುತ್ತಿರುವ ಸೌಲಭ್ಯಗಳ ಕುರಿತು ಮಾತನಾಡಿದರು.

ಬಳಿಕ ಹತ್ತಿರದ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಮೊದಲು ಅಡುಗೆ ಕೋಣೆ ಮತ್ತುದಾಸ್ತಾನು ಕೊಠಡಿಯನ್ನು ವೀಕ್ಷಿಸಿದರು. ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟವನ್ನುಖಚಿತಪಡಿಸಿಕೊಳ್ಳಲು ಖುದ್ದಾಗಿ ಪರಿಶೀಲನೆ ನಡೆಸಿದರು.

ಮೆನುವಿನಂತೆ ಆಹಾರ ನೀಡಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಿ, ಶುಚಿಗೊಳಿಸುವಿಕೆಗೆ ಹೆಚ್ಚಿನ ಆದ್ಯತೆ ನೀಡಲು ಸೂಚಿಸಿದರು. ನಿಲಯದ ಆವರಣ ಮತ್ತು ಶೌಚಾಲಯಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಲು ವಾರ್ಡನ್‌ಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ವಿದ್ಯಾರ್ಥಿಗಳೊಂದಿಗೆ ಸಂವಾದ:

ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಗಳು, ಓದಿಗೆಪೂರಕವಾದ ವಾತಾವರಣವಿದೆಯೇ ಮತ್ತು ಮೂಲಭೂತ ಸೌಕರ್ಯಗಳ ಕೊರತೆಯಿದೆಯೇ ಎಂದು ವಿಚಾರಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments