ಶಿವಮೊಗ್ಗ ಸಮೀಪದ ಹೊಸೂಡಿಯಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ವೀರಭದ್ರಸ್ವಾಮಿ ಕೆಂಡಾರ್ಚನಾಮಹೋತ್ಸವ ಅತ್ಯಂತ ಶ್ರದ್ಧಾ ಭಕ್ತಿಯಿಂದ ಜರುಗಿತು.
ಇದಕ್ಕೂ ಪೂರ್ವದ ಕಾರ್ಯಕ್ರಮದ ಸಾನ್ನಿಧ್ಯವನ್ನು ಹಾರನಹಳ್ಳಿಯ ಶ್ರೀ ರಾಮಲಿಂಗೇಶ್ವರ ಮಠದ ಶ್ರೀಶಿವಯೋಗೀಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಿದ್ದರು. ಹೊಸೂಡಿ ವಿಪ್ರ ಮಹಿಳಾ ಸಂಘದಿಂದಆಗಮಿಸಿದ ಭಕ್ತರಿಗೆ ತಂಪು ಪಾನೀಯ, ಮಜ್ಜಿಗೆ ಸೇವೆ ನಡೆಯಿತು. ಸ್ಥಳೀಯ ಭಕ್ತರಲ್ಲದೆ ದೂರದೂರದಊರುಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರು ಶ್ರೀ ದೇವರ ಪಲ್ಲಕ್ಕಿ ರಾಜಬೀದಿ ಉತ್ಸವ, ವೀರಗಾಸೆ, ಕೆಂಡಾರ್ಚನೆಯನ್ನು ಕಣ್ತುಂಬಿಕೊಂಡು ಪುನೀತರಾದರು.
