Homeಜಿಲ್ಲೆಏ. 23 ರಿಂದ 9 ನೇ ಕಾಲುಬಾಯಿ ರೋಗ ಲಸಿಕಾ ಅಭಿಯಾನ : ಪ್ರಭುಲಿಂಗ ಕವಳಿಕಟ್ಟಿ

ಏ. 23 ರಿಂದ 9 ನೇ ಕಾಲುಬಾಯಿ ರೋಗ ಲಸಿಕಾ ಅಭಿಯಾನ : ಪ್ರಭುಲಿಂಗ ಕವಳಿಕಟ್ಟಿ

Spread the love

ಶಿವಮೊಗ್ಗ .09: ಜಿಲ್ಲೆಯಲ್ಲಿ ಜಾನುವಾರುಗಳ ಆರೋಗ್ಯ ರಕ್ಷಣೆಗಾಗಿ ಏಪ್ರಿಲ್ 23 ರಿಂದ 9ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು ಎಲ್ಲ ಜಾನುವಾರುಗಳಿಗೆ ಲಸಿಕೆ ಹಾಕಿಸುವ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.

ಗಮನಿಸಿ:ಪತ್ರಕರ್ತರ ಸಮಸ್ಯೆಯನ್ನು ಸಮ್ಮೇಳನದಲ್ಲಿ ಸರ್ಕಾರದ ಗಮನಕ್ಕೆ ತರಲಾಗುತ್ತದೆ: ಕೆ.ವಿ.ಶಿವಕುಮಾರ್


ಜಿಲ್ಲಾಡಳಿತ
ಕಚೇರಿಯಲ್ಲಿ ಗುರುವಾರ ಏರ್ಪಡಿಸಲಾಗಿದ್ದ 9ನೇ ಸುತ್ತಿನ ಕಾಲು ಮತ್ತು ಜ್ವರ ಲಸಿಕಾ ಕಾರ್ಯಕ್ರಮದ ಜಿಲ್ಲಾ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಾನುವಾರುಗಳಲ್ಲಿ ಕಾಲು ಮತ್ತು ಬಾಯಿರೋಗ(ಎಫ್‌ಎಂಡಿ) ತಡೆಗಟ್ಟಲು ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ ಉಚಿತವಾಗಿ ಪ್ರತಿ 6 ತಿಂಗಳಿಗೊಮ್ಮೆ ಲಸಿಕೆಗಳನ್ನು ನೀಡಲಾಗುತ್ತದೆ. ಇದೇ ಏಪ್ರಿಲ್ 23 ರಿಂದ ಮೇ 22 ರವರೆಗೆ ಒಟ್ಟು 30 ದಿನಗಳ ಕಾಲ ಜಿಲ್ಲೆಯಾದ್ಯಂತ ಅಭಿಯಾನ ನಡೆಯಲಿದ್ದು 2030 ವೇಳೆಗೆ ದೇಶದಿಂದ ಕಾಲುಬಾಯಿ ರೋಗವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಗುರಿಯನ್ನು ಕಾರ್ಯಕ್ರಮ ಹೊಂದಿದೆ.

ಜಿಲ್ಲೆಯ ಅಂಕಿ-ಅಂಶ : ಜಿಲ್ಲೆಯಲ್ಲಿ 3,86,030 ಹಸುಗಳು ಹಾಗೂ 80,622 ಎಮ್ಮೆಗಳು ಸೇರಿ ಒಟ್ಟು4,66,652 ಜಾನುವಾರುಗಳಿದ್ದು ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಇದಕ್ಕಾಗಿ ಜಿಲ್ಲೆಯಾದ್ಯಂತ ಒಟ್ಟು477 ಲಸಿಕೆದಾರರನ್ನು ನೇಮಕ ಮಾಡಲಾಗಿದೆ.

ಜಿಲ್ಲೆಯಲ್ಲಿ 532715 ಡೋಸ್ ಲಸಿಕೆ ದಾಸ್ತಾನು ಮಾಡಲಾಗಿದ್ದು, ಲಸಿಕಾ ಕಾರ್ಯಕ್ರಮವು ಪ್ರತಿದಿನ ಬೆಳಿಗ್ಗೆ 7 ರಿಂದ 11 ಗಂಟೆಯವರೆಗೆ ನಡೆಯಲಿದೆ. ಲಸಿಕೆ ಹಾಕುವ ಸಮಯದಲ್ಲಿ ರೈತರ ಆಧಾರ್ ಸಂಖ್ಯೆ ಹಾಗೂ ಜಾನುವಾರುಗಳ ಕಿವಿ ಓಲೆ(ಟ್ಯಾಗ್ ನಂಬರ್) ವಿವರಗಳನ್ನು ಕಡ್ಡಾಯವಾಗಿ ಪಡೆಯಲಾಗುವುದು ಎಂದಅವರು ಇದನ್ನುಭಾರತ್ ಪಶುಧನ್ತಂತ್ರಾಂಶದಲ್ಲಿ ಅಪ್‌ಲೋಡ್ ಮಾಡುವಂತೆ ಸಂಬಂಧಿಸಿದಅಧಿಕಾರಿಗಳಿಗೆ ತಿಳಿಸಿದರು.

ಲಸಿಕೆ ಹಾಕಿದ ನಂತರ ಯಾವುದೇ ವ್ಯತಿರಿಕ್ತ ಪರಿಣಾಮಗಳು ಕಂಡುಬಂದಲ್ಲಿ ತಕ್ಷಣದ ಚಿಕಿತ್ಸೆಗಾಗಿ ತುರ್ತು ಔಷಧಿಗಳನ್ನು ಸಿದ್ಧಪಡಿಸಿಕೊಳ್ಳಲು ಸೂಚಿಸಿದ ಅವರು ಗ್ರಾ.ಪಂ ಗಳ ಹಳ್ಳಿಗಳಲ್ಲಿ ವಾರ್ಡ್ಗಳಲ್ಲಿ, ಲಸಿಕೆನೀಡುವ ಬಗ್ಗೆ ಹೆಚ್ಚಿನ ಪ್ರಚಾರ ನೀಡುವಂತೆ ತಿಳಿಸಿದರು.

ಮನೆ ಬಾಗಿಲಿಗೆ ಲಸಿಕೆ : ಪಶುಪಾಲನಾ ಇಲಾಖೆಯ ಸಿಬ್ಬಂದಿಗಳು ರೈತರ ಮನೆಬಾಗಿಲಿಗೆ ಬಂದು ಉಚಿತವಾಗಿ ಲಸಿಕೆ ಹಾಕಲಿದ್ದು, ಜಿಲ್ಲೆಯ ಎಲ್ಲಾ ರೈತರು ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸುವ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದರು.

ಸಭೆಯಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಬಾಬುರತ್ನ, ಡಿಯುಡಿಸಿ ಯೋಜನಾ ನಿರ್ದೇಶಕ ರಂಗಸ್ವಾಮಿ, ಇತರೆ ಅಧಿಕಾರಿಗಳು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments