ಶಿವಮೊಗ್ಗ, ಏ.10: ಜಿಲ್ಲೆ ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟಿ ತಿರುವಿನಲ್ಲಿ ರಸ್ತೆ ತಡೆಗೋಡೆನಿರ್ಮಾಣ ಕಾಮಗಾರಿಯ ವೇಳೆ ಮಣ್ಣು ಕುಸಿದು ಸಾವನ್ನೊಪ್ಪಿದ ಮೂವರು ಕಾರ್ಮಿಕರ ಕುಟುಂಬಕ್ಕೆ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಸಿ ಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಗಮನಿಸಿ: ಏ.12 ರಂದು ವಿದ್ಯುತ್ ವ್ಯತ್ಯಯ ಯಾವ್ಯವ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ? ಮಾಹಿತಿ ಇಲ್ಲಿದೆ
ಮೃತಪಟ್ಟ ಘಟನೆ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರೊಂದಿಗೆಮಾತುಕತೆ ನಡೆಸಿ, ಮಾಹಿತಿ ಪಡೆದಿದ್ದೇನೆ. ಕುಟುಂಬಕ್ಕೆ ಆಧಾರವಾಗಿದ್ದ ದುಡಿಯುವ ಜೀವಗಳು ಈಘಟನೆಯಲ್ಲಿ ಬಲಿಯಾಗಿದ್ದು, ಮಾನವೀಯ ನೆಲೆಯಲ್ಲಿ ಮೃತ ಕಾರ್ಮಿಕರ ಕುಟುಂಬಕ್ಕೆ ಪರಿಹಾರನೀಡಲಾಗುವುದು ಎಂದು ತಿಳಿಸಿದ್ದಾರೆ.
