Homeಜಿಲ್ಲೆಶರಾವತಿ ಪಂಪ್ಡ್ ಯೋಜನೆ ವಿರುದ್ಧ ಏ.16 ರಂದು ಜಾಥ: ಕೆ.ಎಸ್. ಈಶ್ವರಪ್ಪ

ಶರಾವತಿ ಪಂಪ್ಡ್ ಯೋಜನೆ ವಿರುದ್ಧ ಏ.16 ರಂದು ಜಾಥ: ಕೆ.ಎಸ್. ಈಶ್ವರಪ್ಪ

Spread the love

ಶಿವಮೊಗ್ಗ , ಏ.13: ರಾಜ್ಯ ಮತ್ತು ದೇಶಕ್ಕೆ ಮಾರಕವಾದ ಶರಾವತಿ ಪಂಪ್ಡ್ ಯೋಜನೆ ವಿರುದ್ಧ ಏ.16 ರಂದು ಸೈಕಲ್ ಹಾಗೂ ಮೋಟಾರು ವಾಹನಗಳ ಜಾಥಾವನ್ನು ರಾಷ್ಟ್ರಭಕ್ತ ಬಳಗ ಮತ್ತು ಪರಿಸರಕ್ಕಾಗಿ ನಾವು ಸಂಘಟನೆಗಳಿಂದ ಹಮ್ಮಿಕೊಳ್ಳಲಾಗಿದೆ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.

ಅವರಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಯೋಜನೆ ವಿರುದ್ಧ ಈಗಾಗಲೇ ಹಲವು ಹೋರಾಟಗಳನ್ನು ನಡೆಸಿದ್ದು ಮುಂದುವರಿದ ಭಾಗಗಳಲ್ಲಿ ಶಿವಮೊಗ್ಗ ನಗರದಲ್ಲಿ ಈ ಯೋಜನೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ವಾಹನ ಜಾಥಾವನ್ನು ಏರ್ಪಡಿಸಲಾಗಿದೆ ಎಂದರು.

ಈ ಜಾಥಾಕ್ಕೆ ಶಿವಮೊಗ್ಗ ನಗರದ ಅಣ್ಣಾ ಹಜಾರೆ ಹೋರಾಟ ಸಮಿತಿ, ಸೈಕಲ್ ಕ್ಲಬ್, ಸಾಹಸ ಮತ್ತು ಸಾಂಸ್ಕೃತಿಕ ಅಕಾಡೆಮಿ, ತರುಣೋದಯ ಘಟಕ, ಕರ್ನಾಟಕ ರಕ್ಷಣಾ ವೇದಿಕೆ ಸಿಂಹಸೇನೆ ಸೇರಿದಂತೆ ಹಲವಾರು ಸಂಘ-ಸಂಸ್ಥೆಗಳು ಪಾಲ್ಗೊಳ್ಳುತ್ತಿದ್ದು, ಅಂದು ಬೆಳಿಗ್ಗೆ 10 ಗಂಟೆಗೆ ಫ್ರೀಡಂ ಪಾರ್ಕ್‌ನಲ್ಲಿ ಖ್ಯಾತ ವೈದ್ಯರಾದ ಡಾ. ಶಿವರಾಮಕೃಷ್ಣ, ಡಾ.ಪಿ.ನಾರಾಯಣ್ ಉದ್ಘಾಟಿಸಿ ಮುಖ್ಯ ಭಾಷಣ ಮಾಡಲಿದ್ದಾರೆ ಎಂದರು.

ಕೆಪಿಸಿಎಲ್‌ನವರು ಈ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಕಾಮಗಾರಿ ಕೈಗೊಳ್ಳದಂತೆ ಹೈಕೋರ್ಟ್ ಆದೇಶಿಸಿದೆ. ಈ ಯೋಜನೆ ಜಾರಿಗೆ ಸಚಿವರೊಬ್ಬರು ಆಸಕ್ತಿ ತೋರಿದ್ದು, ಹತ್ತು ಸಾವಿರ ಕೋಟಿ ರೂ. ವೆಚ್ಚದ ಈ ಯೋಜನೆಯ ಹಣವನ್ನು ಲೂಟಿ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದರು.

ಗಮನಿಸಿ: ಏ.15 ಮತ್ತು 16 ರಂದು ವಿದ್ಯುತ್ ವ್ಯತ್ಯಯ

ಈ ಯೋಜನೆ ವಿರುದ್ಧ ಸಾಕಷ್ಟು ವಿರೋಧ ಮತ್ತು ಪ್ರತಿಭಟನೆಗಳು ನಡೆದಿದ್ದು, ಹಲವಾರು ಸಂಘ ಸಂಸ್ಥೆಗಳು, ಮಠಾಧೀಶರು, ಪರಿಸರ ಹೋರಾಟಗಾರರು, ನಿವೃತ್ತ ನ್ಯಾಯಾಧೀಶರು, ವಿಷಯ ತಜ್ಞರು ಯೋಜನೆಯಲ್ಲಿನ ಲೋಪದೋಷಗಳನ್ನು ಕೆಪಿಸಿಎಲ್‌ಗೆ ಮನವರಿಕೆ ಮಾಡಿಕೊಟ್ಟರೂ ಸಹ ಕೆಪಿಸಿಎಲ್‌ನವರು ಪರಿಸರಕ್ಕೆ ಮತ್ತು ಪಶ್ಚಿಮ ಘಟ್ಟಗಳಿಗೆ ಮಾರಕವಾಗಿರುವ ಹಾಗೂ ಯಾವುದೇ ಆರ್ಥಿಕ ಲಾಭವನ್ನು ತರದ ಯೋಜನೆಯನ್ನು ಜಾರಿಗೊಳಿಸಲು ಹೊರಟಿರುವುದು ಪ್ರಶ್ನಾರ್ಥಕವಾಗಿದೆ ಎಂದ ಅವರು, ಯಾವುದೇ ಕಾರಣಕ್ಕೂ ಈ ಯೋಜನೆ ಕೈ ಬಿಡುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದರು.

16 ರಂದು ನಡೆಯಲಿರುವ ಸೈಕಲ್ ಹಾಗೂ ವಾಹನಗಳ ಜಾಥಾದಲ್ಲಿ 400 ಕ್ಕೂ ಹೆಚ್ಚು ಬೈಕ್‌ಗಳು, 200 ಕ್ಕೂ ಹೆಚ್ಚು ಕಾರುಗಳು ಹಾಗೂ 500 ಕ್ಕೂ ಹೆಚ್ಚು ಸೈಕಲ್‌ಗಳು ಭಾಗವಹಿಸುತ್ತಿವೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮನವಿ ಮಾಡಿಕೊಂಡರು. ನಗರದ ಎರಡು ಮಾರ್ಗದಲ್ಲಿ ಸಂಚರಿಸುವ ಜಾಥಾವು ಮಹಾವೀರ ವೃತ್ತದಲ್ಲಿ ಸಂಪನ್ನಗೊಳ್ಳಲಿದ್ದು, ನಂತರ ಸಮಾರೋಪ ಹಾಗೂ ಬಹಿರಂಗ ಸಭೆ ನಡೆಯಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಶ್ರೀಕಾಂತ್, ಡಾ.ಶೇಖರ್ ಗೌಳೇರ್, ಜನಾರ್ಧನ್ ಪೈ, ಪರಿಸರ ರಮೇಶ್, ಎಸ್.ಬಿ. ಅಶೋಕ್‌ಗಾಂಧಿ, ಪರಿಸರ ಪ್ರಕಾಶ್, ಹರೀಶ್ ಕಾರ್ಣಿಕ್, ಎಸ್.ವಿಶ್ವೇಶ್ವರಯ್ಯ, ಸುಬ್ರಹ್ಮಣ್ಯ, ಮಹಾದೇವಸ್ವಾಮಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments