Homeಜಿಲ್ಲೆಸುಪ್ರೀಂ ಕೋರ್ಟ್ ನಿಂದ ವಿಶೇಷ ಲೋಕ್ ಅದಾಲತ್‌ಗಳ ಆಯೋಜನೆ: ನ್ಯಾ.ಸಂತೋಷ್.ಎಂ.ಎಸ್

ಸುಪ್ರೀಂ ಕೋರ್ಟ್ ನಿಂದ ವಿಶೇಷ ಲೋಕ್ ಅದಾಲತ್‌ಗಳ ಆಯೋಜನೆ: ನ್ಯಾ.ಸಂತೋಷ್.ಎಂ.ಎಸ್

Spread the love

ಶಿವಮೊಗ್ಗ, ಮೇ 11 : ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ಪ್ರಕರಣಗಳ ಶೀಘ್ರ ವಿಲೇವಾರಿಗಾಗಿ ಆಗಸ್ಟ್ 21, 22 ಮತ್ತು 23, ರಂದುಸಮಾಧಾನ ಸಮಾರೋಹಎಂಬ ವಿಶೇಷ ಲೋಕ್ ಅದಾಲತ್ ನಡೆಯಲಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೊಷ್ ಎಂ ಎಸ್ ತಿಳಿಸಿದರು.

ಸಮಾಧಾನ ಸಮಾರೋಹ, ರಾಷ್ಟ್ರೀಯ ಮತ್ತು ವಿಶೇಷ ಲೋಕ್ ಅದಾಲತ್ ಹಾಗೂ ಬಂಜಾರ ಸಮುದಾಯಕ್ಕೆ ವಿಶೇಷ ಕಾನೂನು ಅರಿವು ಮತ್ತು ಆರೋಗ್ಯ ತಪಾಸಣಾ ಶಿಬಿರದ ಕುರಿತು ಮಾಹಿತಿ ನೀಡಲು ಸೋಮವಾರ ನ್ಯಾಯಾಲಯ ಆವರಣದ ವಿಸಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ, ಶಿವಮೊಗ್ಗ ಜಿಲ್ಲೆಯಲ್ಲಿ ಮುಂಬರುವ ತಿಂಗಳುಗಳಲ್ಲಿ ಸರಣಿ ಲೋಕ್ ಅದಾಲತ್ ಹಾಗೂ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಸುಪ್ರೀಂ ಕೋರ್ಟ್‌ ನಲ್ಲಿಸಮಾಧಾನ ಸಮಾರೋಹ” : ಸುಪ್ರೀಂ ಕೋರ್ಟ್ ನಲ್ಲಿ ಬಾಕಿ ಇರುವ ಪ್ರಕರಣಗಳ ಶೀಘ್ರ ವಿಲೇವಾರಿಗಾಗಿ ಆಗಸ್ಟ್ 21, 22 ಮತ್ತು 23 ರಂದುಸಮಾಧಾನ ಸಮಾರೋಹಎಂಬವಿಶೇಷ ಲೋಕ್ ಅದಾಲತ್ ನಡೆಯಲಿದೆ.

ಜಿಲ್ಲೆಯಿಂದ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿ, ಬಹುಕಾಲದಿಂದ ಬಾಕಿ ಇರುವ 47 ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲು ಗುರುತಿಸಲಾಗಿದೆ. ಹೀಗೆ ಸುಪ್ರೀಂಕೋರ್ಟ್ ನಲ್ಲಿ ಬಹುಕಾಲದಿಂದ ಬಾಕಿ ಇದ್ದು, ರಾಜೀ ಸಂಧಾನಕ್ಕೆ ಸಿದ್ದವಿರುವವರು ಈಗಲೂ ಸಹಕಾನೂನು ಸೇವಾ ಪ್ರಾಧಿಕಾರವನ್ನು ಸಂಪರ್ಕಿಸಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದು. ಸಮಾಧಾನ ಸಮಾರೋಹಕ್ಕೆ ಗುರುತಿಸಲಾದ ಪ್ರಕರಣಗಳಲ್ಲಿ ಪಕ್ಷಗಾರರಿಗೆ ನೋಟಿಸ್ ಹೊರಡಿಸಲಾಗುತ್ತದೆ. ನಿಗದಿತ ದಿನಾಂಕದಂದು ನುರಿತ ಮಧ್ಯಸ್ಥಗಾರರ ವಿಚಾರಣೆ ನಡೆದು, ಸುಪ್ರೀಂಕೋರ್ಟ್ ನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಕರಣವನ್ನು ಇತ್ಯರ್ಥ ಪಡಿಸಲಾಗುವುದು.

ರೀತಿಯ ವಿಲೇವಾರಿಯಿಂದ ಪಕ್ಷಗಾರರಿಗೆ ಯಾವುದೇ ಹಣ ವ್ಯಯ ಆಗುವುದಿಲ್ಲ. ಹಾಗೂ ಸಮಾಧಾನದ ನ್ಯಾಯ ಒದಗುತ್ತದೆ ಆದ್ದರಿಂದ ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು. ಸಾರ್ವಜನಿಕರು ತಮ್ಮ ಪ್ರಕರಣಗಳ ಸುಲಭ ವಿಲೇವಾರಿಗಾಗಿ samadhansamaroh@gmail.com ಗೆ ಇ-ಮೇಲ್ ಮಾಡುವ ಮೂಲಕ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವನ್ನು ಸಂಪರ್ಕಿಸುವ ಮೂಲಕ ಅವಕಾಶವನ್ನು ಬಳಸಿಕೊಳ್ಳಬಹುದು ಎಂದರು.

ರಾಷ್ಟ್ರೀಯ ಲೋಕ್ ಅದಾಲತ್ : ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಜುಲೈ 11 ರಂದು ಶಿವಮೊಗ್ಗ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ವರ್ಷದ ಎರಡನೇ ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದೆ.

ವೈವಾಹಿಕ ವಿವಾದಗಳು ಹಾಗೂ ಕೌಟುಂಬಿಕ ದೌರ್ಜನ್ಯ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಅಪಘಾತ ಪರಿಹಾರ ಹಾಗೂ ವಿಮಾ ಪ್ರಕರಣಗಳು, ಸಿವಿಲ್ ವ್ಯಾಜ್ಯಗಳು, ಆಸ್ತಿ ವಿಭಾಗ ಹಾಗೂ ಭೂ ಸ್ವಾಧೀನ ಪ್ರಕರಣಗಳು, ರಾಜಿ ಮಾಡಿಕೊಳ್ಳಬಹುದಾದ ಕ್ರಿಮಿನಲ್ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ ಹಾಗೂ ಗ್ರಾಹಕ ವೇದಿಕೆಯ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ ಎಂದರು.

ಗಮನಿಸಿ:ಕಾಣೆಯಾಗಿದ್ದಾರೆ

ಹಿಂದಿನ ಸಾಧನೆ: ಕಳೆದ ಮಾರ್ಚ್ 14 ರಂದು ನಡೆದ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಒಟ್ಟು14,501 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದ್ದು, ಒಟ್ಟು ರೂ. 28.48 ಕೋಟಿಗಳಿಗೂ ಅಧಿಕ ಪರಿಹಾರವನ್ನು ವಿತರಿಸಲಾಗಿತ್ತು. ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ದಿನಾಂಕ : 30-04-2026 ರವರೆಗೆ ಒಟ್ಟು 7427 ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ ಎಂದರು.

ಬಂಜಾರ ಸಮುದಾಯಕ್ಕೆ ವಿಶೇಷ ಶಿಬಿರ :

ಶಿವಮೊಗ್ಗ ನಗರದ ಬಂಜಾರ ಸಮುದಾಯ ಭವನದಲ್ಲಿ ಮೇ 30 ರಂದು ಬಂಜಾರ ಸಮುದಾಯದವರಿಗಾಗಿ ವಿಶೇಷ ಕಾನೂನು ಅರಿವು ಕಾರ್ಯಕ್ರಮ ಹಾಗೂ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಸಂದರ್ಭದಲ್ಲಿ ವಿವಿಧ ಸರ್ಕಾರಿ ಇಲಾಖೆಗಳ ಮಳಿಗೆಗಳನ್ನು ಸ್ಥಾಪಿಸಲಾಗುತ್ತಿದ್ದು, ಸಮುದಾಯಕ್ಕೆ ಲಭ್ಯವಿರುವ ಸೌಲಭ್ಯಗಳ ಕುರಿತು ಮಾಹಿತಿಯನ್ನು ಸ್ಥಳದಲ್ಲಿಯೇ ನೀಡಲಾಗುತ್ತಿದ್ದು ಸಮುದಾಯದವರು ಇದರ ಸದುಪಯೋಗ ಪಡೆಯಬೇಕೆಂದರು.

ಚೆಕ್‌ಬೌನ್ಸ್ ಪ್ರಕರಣ(ಎನ್.. ಆಕ್ಟ್) ಇತ್ಯರ್ಥಕ್ಕೆ ವಿಶೇಷ ಲೋಕ್ ಅದಾಲತ್ ;

ಚೆಕ್ ಅಮಾನ್ಯ ಪ್ರಕರಣಗಳ ಶೀಘ್ರ ವಿಲೇವಾರಿಗಾಗಿ ಜುಲೈ 18 ಮತ್ತು ನವೆಂಬರ್ 21 ರಂದು ವಿಶೇಷ ಲೋಕ್ ಅದಾಲತ್‌ಗಳನ್ನು ಹಮ್ಮಿಕೊಳ್ಳಲಾಗಿದ್ದು ಉಭಯ ಪಕ್ಷಗಾರರ ಉಪಸ್ಥಿತಿಯಲ್ಲಿ ನ್ಯಾಯಾಧೀಶರುಮತ್ತು ನ್ಯಾಯಿಕೇತರ ಸಂಧಾನಕಾರರು ರಾಜೀ ಸಂಧಾನದ ಪ್ರಕ್ರಿಯೆಯನ್ನು ಕೈಗೊಂಡು ಪಕ್ಷಗಾರರು ವಿವಾದವನ್ನು ಇತ್ಯರ್ಥಪಡಿಸಿಕೊಂಡರೆ ಅದರಂತೆ ಅಂತಿಮ ಆದೇಶವನ್ನು ಅದೇ ದಿನದಂದು ನೀಡುವಅವಕಾಶವನ್ನು ಸಾರ್ವಜನಿಕರು ಮತ್ತು ಪಕ್ಷಗಾರರು ಸದುಪಯೋಗ ಪಡೆಯಬೇಕೆಂದರು.

ಸಾರ್ವಜನಿಕರು ಮತ್ತು ಕಕ್ಷಿದಾರರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಎಲ್ಲಾ ಸೌಲಭ್ಯಗಳ ಸದುಪಯೋಗ ಪಡಿಸಿಕೊಳ್ಳಬೇಕೆಂದು ಅವರು ಕೋರಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments