Homeಜಿಲ್ಲೆವಿಪ್ರ ನೇರ ಸಾಲ ಯೋಜನೆಗೆ 24 ಕೋಟಿ ಬಳಕೆ

ವಿಪ್ರ ನೇರ ಸಾಲ ಯೋಜನೆಗೆ 24 ಕೋಟಿ ಬಳಕೆ

Spread the love

ಶಿವಮೊಗ್ಗ,ಮೇ.12  : ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ 2025-26 ನೇ ಸಾಲಿನಲ್ಲಿ ವಿಪ್ರ ನೇರ ಸಾಲ ಯೋಜನೆಗೆ 24 ಕೋಟಿ ರೂ. ಹಾಗೂ ಸಾಂದೀಪಿನಿ ಶಿಷ್ಯ ವೇತನಕ್ಕೆ 5.50 ಕೋಟಿ ರೂ.ಬಳಕೆ ಮಾಡಲಾಗಿದೆ ಎಂದು ಮಂಡಳಿಯ ಜಿಲ್ಲಾ ನಿರ್ದೇಶಕ ಪಿ.ಎಂ.ಮಾಲತೇಶ್ ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಪ್ರ ಸಾಲ ಯೋಜನೆ ಅತ್ಯಂತ ಜನಪರಿಯತೆಗೊಂಡಿದು ಇದರಲ್ಲಿ ರಾಜ್ಯಾದ್ಯಂತ 1333 ಅರ್ಜಿಗಳು ಸಲ್ಲಿಕೆಯಾಗಿದ್ದು  ಅವುಗಳಲ್ಲಿ 38 ಅರ್ಜಿಗಳು ತಿರಸ್ಕೃತಗೊಂಡಿವೆ. 1295 ಅರ್ಜಿಗಳು ಅಂಗೀಕೃತಗೊಂಡಿರುತ್ತವೆ. ಈ ವರೆಗೆ 750 ಅಭ್ಯರ್ಥಿಗಳಿಗೆ  ಶೇ.20 ರ ಸಹಾಯಧನ ಹಾಗೂ ಶೇ. 4 ರ ಬಡ್ಡಿ ದರದಲ್ಲಿ ತಲಾ 2 ಲಕ್ಷ ರೂ.ಗಳನ್ನು 33 ತಿಂಗಳ ಅವಧಿಯ ಮರುಪಾವತಿಗಾಗಿ ಅವಕಾಶ ಕಲ್ಪಿಸಲಾಗಿದೆ.  2026 ರ ಮಾರ್ಚ್‌ನಲ್ಲಿ ಹಣ ಪಡೆದವರು ಜೂನ್ ತಿಂಗಳಿಂದ ಹಾಗೂ ಏಪ್ರಿಲ್ ನಲ್ಲಿ ಹಣ ಪಡೆದವರಿಗೆ ಜುಲೈನಿಂದ ಮರುಪಾವತಿಸುವ ಕಂತುಗಳು ಪ್ರಾರಂಭವಾಗುತ್ತವೆ ಎಂದರು.

ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂಥೆ 164 ಅರ್ಜಿಗಳು ಸಲ್ಲಿಕೆಯಾಗಿದ್ದು ಈ ವರೆಗೆ 83 ಅಭ್ಯರ್ಥಿಗಳಿಗೆ ತಲಾ 2 ಲಕ್ಷ ರೂ. ಸಾಲ ಸೌಲಭ್ಯ ನೀಡಲಾಗಿದೆ. ಅಭ್ಯರ್ಥಿಗಳ ಬ್ಯಾಂಕ್ ವಿವವರ, ಅಂಚೆ ಕಚೇರಿ ಖಾತೆಯ ಗರಿಷ್ಠ ವಹಿವಾಟು ಮಿತಿ 2 ಲಕ್ಷ ರೂ.ಇದ್ದುದರಿಂದ ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸದಿರುವ ಕಾರಣಕ್ಕೆ ರಾಜ್ಯದಲ್ಲಿ 54 ಅಭ್ಯರ್ಥಿಗಳ ಅಕೌಂಟ್ ಗೆ ಜಮಾವಣೆಯಾದ ಹಣ ವಾಪಸ್ ಮಂಡಳಿಗೆ ಬಂದಿದೆ ಎಂದ ಅವರು ಅರ್ಜಿ ಸಲ್ಲಿಸುವವರು ಇದನ್ನು ಗಮನಿಸಬೇಕು. ಇವರೆಲ್ಲರಿಗೂ ಮೇ ಅಂತ್ಯದೊಳಗೆ ಪುನ ಅವರವರ ಬ್ಯಾಂಕ್ ಅಕೌಂಟಿಗೆ ಹಣ ಜಮೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಸಾಂದೀಪಿನಿ ಶಿಷ್ಯ ವೇತನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುವ ಸಲುವಾಗಿ 2025-26 ನೇ ಸಾಲಿನಲ್ಲಿ ರಾಜ್ಯದಲ್ಲಿ ಪ್ರತಿ ವಿದ್ಯಾರ್ಥಿಗೆ 15  ಸಾವಿರ ರೂ.ಗಳಂತೆ 5. 50 ಕೋಟಿ ರೂ.ಹಣ ನೀಡಲಾಗಿದೆ. ಕೆ.ಎ.ಎಸ್., ಐ.ಎ.ಎಸ್. ಸ್ಪರ್ಧಾತ್ಮಕ ಪರಿಕ್ಷೆ ತೆಗೆದುಕೊಳ್ಳಲು ಚಾಣಕ್ಯ  ತರಬೇತಿ ಯೋಜನೆಯಲ್ಲಿ ಒಂದು ಲಕ್ಷ ರೂ. ನೆರವು ನೀಡಲಾಗುತ್ತದೆ. ಆದರೆ ಈ ಯೋಜನೆ ಲಾಭ ಪಡೆಯಲು ಬಂದ ಅರ್ಜಿಗಳ ಸಂಖ್ಯೆ ತೀರಾ ವಿರಳವಾಗಿದೆ ಎಂದು ವಿಷಾದಿಸಿದರು.

ಗಮನಿಸಿ:ಮೇ. 16 ರಿಂದ ಅಡ್ಡಪಲ್ಲಕ್ಕಿ ಮಹೋತ್ಸವ, -ಬಿಎಸ್‌ವೈ ಕೃತಜ್ಞತಾ ಸಮಾರಂಭ            

ಬರುವ ಜೂನ್ ಜುಲೈ ಮಾಹೆಯಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮುಕ್ತಾಯಗೊಳ್ಳುವುದರಿಂದ ಆರ್ಥಿಕವಾಗಿ ಹಿಂದುಳಿದವರ ಪ್ರಮಾಣ ಪತ್ರ (ಇ.ಡಬ್ಲ್ಯೂ.ಎಸ್.) ವನ್ನು ಈಗಲೇ ಸಿದ್ಧಪಡಿಸಿಕೊಂಡು ಇರಬೇಬೇಕು.

ಸಾಂದೀಪಿನ ಶಿಷ್ಯವೇತನಕ್ಕೆ ಹೆಚ್ಚಿನ ಅವಧಿ ಇರುವುದರಿಂದ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೆ ಆತಂಕಕ್ಕೆ ಒಳಗಾಗಬಾರದು. ಹೆಚ್ಚಿನ ಮಾಹಿತಿಗೆ ಅಕ್ಷಯ ಮೊ. 9620467788 ಗೆ  ಸಂಪರ್ಕಿಸಬಹುದು ಎಂದರು.

ಸುದ್ದಿಗೋಷ್ಠಿಯಲ್ಲಿ  ಎಕೆಬಿಎಮ್‌ಎಸ್‌ನ ಜಿಲ್ಲಾ ಸಂಚಾಲಕ ರಘುರಾಮ್,  ಪ್ರಮುಖರಾದ ಸಂತೋಷ್ ಕುಮಾರ್, ಎನ್,ಎನ್.ಸುಂದರರಾಜ್, ಸುಮಿತ್ರಮ್ಮ, ಅಕ್ಷಯ ಇದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments