Homeಜಿಲ್ಲೆಸದಸ್ಯರ ವಂತಿಕೆಯನ್ನು ಕ್ರೋಢೀಕರಿಸಿ ಗಣೇಶನಿಗೆ ಬೆಳ್ಳಿ ಕಿರೀಟ ಅರ್ಪಣೆ

ಸದಸ್ಯರ ವಂತಿಕೆಯನ್ನು ಕ್ರೋಢೀಕರಿಸಿ ಗಣೇಶನಿಗೆ ಬೆಳ್ಳಿ ಕಿರೀಟ ಅರ್ಪಣೆ

Spread the love

ಶಿವಮೊಗ್ಗ ಟೆಲೆಕ್ಸ್ ಸುದ್ದಿ,ಸೆ.15

ಹೊನ್ನಾಳಿಯ ದುರ್ಗಿಪಟ್ಟಣದ ಶ್ರೀ ದುರ್ಗಮ್ಮ ದೇವಿ ಮತ್ತು ಓಂ ಗಣೇಶ ಸೇವಾ ಸಮಿತಿ ಆಡಳಿತ ಮಂಡಳಿಯು 3.5 ಲಕ್ಷ ಮೌಲ್ಯದ ಬೆಳ್ಳಿ ಆಭರಣವನ್ನು ಕಾಣಿಕೆ ನೀಡುವ ಈ ಬಾರಿ ಗಣೇಶನನ್ನು ವಿನೂತವಾಗಿ ಬರಮಾಡಿಕೊಂಡಿದ್ದಾರೆ.

ದುರ್ಗಿಪಟ್ಟಣದ ಶ್ರೀ ದುರ್ಗಮ್ಮ ದೇವಿ ಮತ್ತು ಓಂ ಗಣೇಶ ಸೇವಾ ಸಮಿತಿ ಆಡಳಿತ ಮಂಡಳಿಯು ಅನಗತ್ಯ ಖರ್ಚು-ವೆಚ್ಚಗಳನ್ನು ಕಡಿತಗೊಳಿಸಿ ಉಳಿಸಿದ ಹಣ ಹಾಗೂ ಸಮಿತಿಯ ಸದಸ್ಯರ ವಂತಿಕೆಯನ್ನು ಕ್ರೋಢೀಕರಿಸಿ, ಶ್ರೀ ಗಣಪತಿಗೆ ಸುಮಾರು 3.5 ಲಕ್ಷಕ್ಕೂ ಹೆಚ್ಚು ಮೌಲ್ಯದ 1.5 ಕೆ.ಜಿ. ತೂಕದ ಆಕರ್ಷಕ ಬೆಳ್ಳಿ ಕಿರೀಟ, ಹಸ್ತ ಹಾಗೂ ಆಯುಧಗಳನ್ನು ಸಮರ್ಪಿಸಿದ್ದು, ಈ ಬೆಳ್ಳಿಯ ಆಭರಣಗಳನ್ನು ಸೇವಾ ಸಮಿತಿಯವರು ಪ್ರಸಿದ್ಧ ಹೊನ್ನಾಳಿ ಹಿರೇಕಲ್ಮಠದಲ್ಲಿ ವಿಶೇಷ ಪೂಜೆ ನೆರವೇರಿಸಿ ಗಣೇಶ ಮೂರ್ತಿಗೆ ಹಾಕಲಾಗಿದೆ.

ಮೆರವಣಿಗೆ ರದ್ದು, ಸರಳ ಆಚರಣೆ:

ಕಳೆದ 40 ವರ್ಷಗಳಿಂದ ಶ್ರದ್ಧಾಭಕ್ತಿಯಿಂದ ಗಣೇಶೋತ್ಸವ ನಡೆಸಿಕೊಂಡು ಬರುತ್ತಿರುವ ಸಮಿತಿಯು, ಈ ಬಾರಿ ತಾಲೂಕಿನಲ್ಲಿ ಎದುರಾಗಿರುವ ಮಳೆ ಅಭಾವ ಹಾಗೂ ಬರಗಾಲದ ಪರಿಸ್ಥಿತಿ ಉಂಟಾಗಿರುವುದರಿಂದ ಹಬ್ಬವನ್ನು ಅತ್ಯಂತ ಸರಳವಾಗಿ ಆಚರಿಸಲು ತೀರ್ಮಾನಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರತಿವರ್ಷ ಆಯೋಜಿಸಲಾಗುತ್ತಿದ್ದ ವೈಭವೋಪೇತ ಧ್ವನಿವರ್ಧಕಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಮೆರವಣಿಗೆಗಳನ್ನು ಈ ಬಾರಿ ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ.

ಸಾರ್ವಜನಿಕರಿಂದ ಶ್ಲಾಘನೆ:

ಕ್ಷಣಿಕ ಆಡಂಬರದ ಕಾರ್ಯಕ್ರಮಗಳಿಗಿಂತ ದೇವರಿಗೆ ಶಾಶ್ವತ ಆಸ್ತಿಯಾಗುವ ಹಾಗೂ ಭಕ್ತಿಯ ಸಂಕೇತವಾಗುವ ಕೊಡುಗೆ ನೀಡಿದ ದುರ್ಗಿಗುಡಿ ಯುವಕರ ಈ ಜನಪರ ನಿರ್ಧಾರಕ್ಕೆ ಪಟ್ಟಣದ ಹಿರಿಯರು, ವರ್ತಕರು ಹಾಗೂ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಮೂರನೇ ದಿನ ಗಣೇಶಮೂರ್ತಿ ವಿಸರ್ಜನೆ:

ಮೂರು ದಿನಗಳ ಕಾಲ ಸಾಂಪ್ರದಾಯಿಕ ಧಾರ್ಮಿಕ ವಿಧಿವಿಧಾನಗಳು, ವಿಶೇಷ ಪೂಜೆ ಹಾಗೂ ಮಹಾಮಂಗಳಾರತಿಗಳು ನೆರವೇರಲಿದ್ದು, ಭಕ್ತಾದಿಗಳಿಗೆ ಪ್ರಸಾದ ವಿನಿಯೋಗದ ವ್ಯವಸ್ಥೆ ಮಾಡಲಾಗಿದೆ. ಸರಳವಾಗಿ ವಿಜೃಂಭಣೆ ಇಲ್ಲದೆ ವಿಸರ್ಜನೆ ಮಾಡಲಾಗುವುದು ಎಂದು ಸಮಿತಿಯ ಪದಾಧಿಕಾರಿಗಳು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments