Homeರಾಜ್ಯಮಹಿಳಾ ಮೀಸಲಾತಿ ಸೋಲಿಸಿದ ಕಾಂಗ್ರೆಸ್‌ನ್ನು ಮಹಿಳೆಯರು ಕ್ಷಮಿಸುವುದಿಲ್ಲ. ಸಂಸದ ಬಿ ವೈ ರಾಘವೇಂದ್ರ ವಾಗ್ದಾಳಿ

ಮಹಿಳಾ ಮೀಸಲಾತಿ ಸೋಲಿಸಿದ ಕಾಂಗ್ರೆಸ್‌ನ್ನು ಮಹಿಳೆಯರು ಕ್ಷಮಿಸುವುದಿಲ್ಲ. ಸಂಸದ ಬಿ ವೈ ರಾಘವೇಂದ್ರ ವಾಗ್ದಾಳಿ

Spread the love

ಮಹಿಳಾ ಮೀಸಲಾತಿ ಸೋಲಿಸಿದ ಕಾಂಗ್ರೆಸ್‌ನ್ನು ಮಹಿಳೆಯರು ಕ್ಷಮಿಸುವುದಿಲ್ಲ.
ಸಂಸದ ಬಿ ವೈ ರಾಘವೇಂದ್ರ ವಾಗ್ದಾಳಿ

 ಮಹಿಳಾ ಮೀಸಲಾತಿ ಮಸೂದೆಯನ್ನು ವಿಫಲಗೊಳಿಸಿರುವ ಕಾಂಗ್ರೇಸ್ ಮತ್ತು ಅದರ ಮಿತ್ರ ಪಕ್ಷಗಳನ್ನು ದೇಶದ ಮಹಿಳೆಯರು ಕ್ಷಮಿಸುವುದಿಲ್ಲ ಎಂದು ವಿಪಕ್ಷಗಳ ವಿರುದ್ದ ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿಗೆ ಅನುಮೋದನೆ ಮತ್ತು ಕ್ಷೇತ್ರ ವಿಂಗಡಣೆಯ ಸಂವಿಧಾನಿಕ ತಿದ್ದುಪಡಿಯಿಂದ ದೇಶದ ಮಹಿಳೆಯರಿಗೆ ಸಮಾನತೆ ತರುವ ಕೆಲಸ ನಡೆದಿತ್ತು. ಆದರೆ ಇದನ್ನು ಕಾಂಗ್ರೆಸ್ ನೇತೃತ್ವದ ಐಎನ್‌ಡಿಎ ಕೂಟ ಸೋಲಿಸುವ ಮೂಲಕ ಸಂಭ್ರಮಿಸಿದೆ. ಇದು ದೇಶದ ಮಹಿಳೆಯರಿಗೆ ಮಾಡಿದ ಅವಮಾನ. ಇದನ್ನು ದೇಶದ ಮಹಿಳೆಯರು ಮರೆಯುವುದಿಲ್ಲ ಎಂದರು.
“ಅಣ್ಣ ಬಸವಣ್ಣನವರ ಸಮಸಮಾಜ ಕಟ್ಟುವ ವಿಚಾರಗಳು ಇಂದಿಗೂ ಜಗತ್ತಿಗೆ ದಾರಿ ದೀಪ, ಬಸವಣ್ಣನವರು ಪ್ರತಿಪಾದಿಸಿದ ಮಹಿಳಾ ಸಮಾನತೆಯನ್ನು ಜಾರಿಗೊಳಿಸುವ ನರೇಂದ್ರ ಮೋದಿ ಅವರ ಆಶಯಕ್ಕೆ ಕಾಂಗ್ರೆಸ್ ತಣ್ಣೀರೆರೆಚಿದೆ. ಕಾಂಗ್ರೇಸ್ ಮಾಡಿದ ಈ ಅವಮಾನವನ್ನು ದೇಶದ ಮಹಿಳೆಯರು ಎಂದಿಗೂ ಮರೆಯಲ್ಲ.”
– ಬಿ.ವೈ ರಾಘವೇಂದ್ರ
   ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರ ಪುನರ್ ವಿಂಗಡಣೆಯ ಹೊರತಾಗಿಯೂ ಹಾಲಿ ಇರುವ ಕ್ಷೇತ್ರಗಳನ್ನು ದ್ವಿಗುಣ ಗೊಳಿಸಲು ಕೇಂದ್ರ ಸರ್ಕಾರ ಸಿದ್ದವಿತ್ತು. ಇದಕ್ಕಾಗಿ ಗೃಹ ಸಚಿವರಾದ ಅಮಿತ್ ಷಾ ಪಾರ್ಲಿಮೆಂಟ್‌ನಲ್ಲೆ ಒಂದು ಗಂಟೆ ಸಮಯ ಕೊಡಿ ಎಂದು ಕೇಳಿಕೊಂಡಿದ್ದರು.ಆದರೆ ವಿಪಕ್ಷಗಳು ದುರುದ್ದೇಶದಿಂದ ಐತಿಹಾಸಿಕ ಮಸೂದೆಯನ್ನು ಸೋಲಿಸಿದವು. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಯಾವ ನೈತಿಕತೆ ಇಟ್ಟುಕೊಂಡು ಮಹಿಳಾ ಮೀಸಲಾತಿ ಬಗ್ಗೆ ಮಾತನಾಡುತ್ತದೆ? ಎಂದು ಪ್ರಶ್ನಿಸಿದರು.
  ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ವಿರೋಧಿಸುವ ಭರದಲ್ಲಿ ದೇಶವನ್ನು ವಿರೋಧಿಸುತ್ತಿವೆ. ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ, ಜನಧನ್. ಜಿಎಸ್‌ಟಿ, ಜಮ್ಮುಕಾಶ್ಮೀರ ಹೀಗೆ ಹಲವಾರು ವಿಷಯಗಳಲ್ಲಿ ವಿರೋಧಿಸುತ್ತಲೆ ಬಂದಿವೆ ಎಂದು ಆರೋಪ ಮಾಡಿದ ಸಂಸದ ಬಿ.ವೈ ರಾಘವೇಂದ್ರ ಅವರು, ಮಹಿಳಾ ಮೀಸಲಾತಿ ಮಸೂದೆಯಿಂದ ಬಿಜೆಪಿಗೆ ಕ್ರೆಡಿಟ್ ಬರುತ್ತದೆ ಎಂಬ ಕಾರಣಕ್ಕೆ ಅದನ್ನು ಸೋಲಿಸಲಾಗಿದೆ ಎಂದರು.
    ಮಹಿಳಾ ಮೀಸಲಾತಿ ಮಸೂದೆಗೆ 2023 ರಲ್ಲಿ ಅನುಮೋದನೆ ಸಿಕ್ಕಿದ್ದರೂ ಮೂರು ವರ್ಷಗಳಾದರೂ ಅದನ್ನು ನೋಟೀಫಿಕೇಶನ್ ಮಾಡದಿರುವಲ್ಲಿ ಯಾವುದೇ ಲೋಪವಾಗಿಲ್ಲ. ಜನಸಂಖ್ಯೆ ಆಧಾರಿತ ವಾಗಿ ಕ್ಷೇತ್ರ ವಿಂಗಡಣೆ ಉದ್ದೇಶವಿರಲಿಲ್ಲ. 2026ರ ಜನಗಣತಿ ನಂತರ ಅದನ್ನು 2029 ರ ಅವಧಿಗೆ ಜಾರಿಗೊಳಿಸುವ ಉದ್ದೇಶದಿಂದ ಸಂವಿಧಾನಿಕ ತಿದ್ದುಪಡಿಗೆ ಈಗ ಮಂಡಿಸಲಾಗಿತ್ತು ಎಂದು ಬಿ.ವೈ ರಾಘವೇಂದ್ರ ಅವರು ಸಮರ್ಥಿಸಿಕೊಂಡರು.
   ಹೊಸನಗರ ಕ್ಷೇತ್ರ ಕುರಿತು ಲೋಕಸಭೆಯಲ್ಲಿ ಮಾತನಾಡಿದ್ದು, ಪಶ್ಚಿಮಘಟ್ಟದ ರಾಜ್ಯಗಳ ಜಿಲ್ಲೆಗಳಲ್ಲಿ ಜನಸಂಖ್ಯೆ ಆಧರಿಸದೆ ಪ್ರಾದೇಶಿಕ ಮಿತಿಯನ್ನು ಆಧರಿಸಿ ಕ್ಷೇತ್ರ ವಿಂಗಡಣೆ ಮಾಡಬೇಕು ಎಂದು ಮನವಿ ಮಾಡಿಕೊಂಡಿದ್ದೇನೆ ಎಂದು ತಿಳಿಸಿದರು.
  ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಜಗಧೀಶ್, ಶಾಸಕ ಚನ್ನಬಸಪ್ಪ, ವಿಧಾನಪರಿಷತ್ ಸದಸ್ಯರಾದ ಡಿ.ಎಸ್ ಅರುಣ್, ಡಾ. ಧನಂಜಯ ಸರ್ಜಿ, ಬಿಜೆಪಿ ನಗರಾಧ್ಯಕ್ಷ ಮೋಹನ್ ರೆಡ್ಡಿ, ಮಾಧ್ಯಮ ಪ್ರಮುಖ ಎಸ್ . ಚಂದ್ರಶೇಖರ್, ಶ್ರೀಮತಿ ರಶ್ಮಿ ಶ್ರೀನಿವಾಸ್, ಸುರೇಖಾಮುರಳೀಧರ, ಹರಿಕೃಷ್ಣ, ಕಾಮತ್, ಮಾಲತೇಶ್, ಮಂಜುನಾಥ್ ಉಪಸ್ತಿತರಿದ್ದರು.
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments